ಜಿಲ್ಲಾ ಸುದ್ದಿತಾಜಾ ಸುದ್ದಿ

ಕನಕಶ್ರೀ ಚಾರಿಟಬಲ್ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ

Share Below Link

ಶಿವಮೊಗ್ಗ : ಕನಕಶ್ರೀ ಚಾರಿಟ ಬಲ್ ಟ್ರಸ್ಟ್, ಬೆಂಗಳೂರು ಇವರ ವತಿಯಿಂದ ೨೦೨೩-೨೪ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಅಂಕ ಗಳಿಸಿದ ಬಾಗಲ ಕೋಟೆ, ಬೆಳಗಾವಿ, ವಿಜಯಪುರ, ದಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಗಳ ಕುರುಬ ಸಮಾಜದ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಧಾರವಾಡದ ಶ್ರೀ ಆಲೂರು ವೆಂಕಟರಾವ್ ಸಾಂಸ್ಕತಿಕ ಭವನದಲ್ಲಿ ಇಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರು ಉದ್ಘಾಟಿಸಿದರು.
ಸುಮಾರು ೨೦೦ಕ್ಕೂ ಹೆಚ್ಚು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀ ಡಾ ಬಸವರಾಜ ದೇವರು ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣ ಚಿಂಗಳೆ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಮಲ್ಲಿಕಾ ಘಂಟಿ, ಮಾಜಿ ಸಂಸದ ಕೆ. ವಿರುಪಾಕ್ಷಪ್ಪ, ಕರ್ನಾಟಕ ಪ್ರದೇಶ ಕುರುಬ ಸಂಘದ ನಿರ್ದೇಶಕ ದೇವರಾಜ ಕಂಬಳಿಯವರು ಹಾಗು ಸಂಘದ ಪದಾಧಿಕಾರಿಗಳು, ಸಮಾಜದ ಹಿರಿಯರು ಹಾಗು ಮುಖಂಡರುಗಳು ಬಾಗವಹಿಸಿದ್ದರು.

Leave a Reply

Your email address will not be published. Required fields are marked *