ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಿವಮೊಗ್ಗ ನಗರದ ಅಭಿವೃದ್ಧಿಗೆ ಸಾರ್ವಜನಿಕರ ಸಲಹೆ ಅಗತ್ಯ: ಚನ್ನಬಸಪ್ಪ

Share Below Link

ಶಿವಮೊಗ್ಗ: ನಗರದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಸಾರ್ವಜ ನಿಕರ ಸಲಹೆ ಹಾಗೂ ಸಹಕಾರ ಅಗತ್ಯ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಚನ್ನಬಸಪ್ಪ ಹೇಳಿದರು.
ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತ ನಾಡಿ, ರೋಟರಿ ಸಂಸ್ಥೆಯು ನಿರಂ ತರವಾಗಿ ಸಮಾಜಮುಖಿ ಕಾರ್ಯ ಗಳನ್ನು ನಡೆಸಿಕೊಂಡು ಬರುತ್ತಿದ್ದು, ಸಮಾಜದ ಪ್ರಗತಿಗೆ ಕೊಡುಗೆ ನೀಡುತ್ತಿರುವುದು ಅಭಿನಂದ ನೀಯ ಎಂದು ತಿಳಿಸಿದರು.
ಶಿವಮೊಗ್ಗ ನಗರದ ಅಭಿವೃ ದ್ಧಿಗೆ ಸಂಬಂಧಿಸಿ ಪ್ರತಿ ತಿಂಗಳು ಸಾರ್ವಜನಿಕರ ಜತೆಯಲ್ಲಿ ಸಭೆ ನಡೆಸಿ ಸಲಹೆ ಹಾಗೂ ಸಹಕಾರ ಪಡೆಯಲಾಗುವುದು. ಅಭಿವೃದ್ಧಿ ಕಾರ್ಯ ನಿರಂತರವಾಗಿ ಮುನ್ನಡೆ ಯಲು ಎಲ್ಲರೂ ಕೈಜೋಡಿಸ ಬೇಕು. ನನ್ನ ಮೇಲೆ ಭರವಸೆ ಇಟ್ಟು ಆಯ್ಕೆ ಮಾಡಿದ್ದು, ನಗರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ಸಮಾರಂಭದ ಅಧ್ಯಕ್ಷತೆ ಯನ್ನು ವಹಿಸಿದ್ದ ರೋಟರಿ ಶಿವ ಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷದ ಜವಾಬ್ದಾರಿಗಳನ್ನು ಸಮ ರ್ಥವಾಗಿ ನಿಭಾಯಿಸಿಕೊಂಡು ಪ್ರಸ್ತುತ ಶಾಸಕರಾಗಿzರೆ. ಮುಂ ದಿನ ದಿನಗಳಲ್ಲಿ ರಾಜ್ಯದಲ್ಲಿಯೇ ಮಾದರಿ ನಗರವಾಗಿ ಶಿವಮೊಗ್ಗ ರೂಪುಗೊಳ್ಳಲಿ, ನಮ್ಮೆಲ್ಲರ ಸಹಕಾರ ಸದಾ ಇರುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಾರ್ವ ಜನಿಕರೊಂದಿಗೆ ಸಂವಾದ ನಡೆಸಿ ಅನೇಕ ಸಲಹೆ ಹಾಗೂ ಸಮಸ್ಯೆ ಗಳಿಗೆ ಸೂಕ್ತ ಉತ್ತರ ನೀಡಿದರು. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ ಕುಮಾರ್, ಮಾಜಿ ಗವರ್ನರ್ ಎಚ್.ಎಲ್.ರವಿ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ ಪ್ರಮುಖರಿ ದ್ದರು.
ಕಡಿದಾಳ್ ಗೋಪಾಲ್, ಡಾ. ರವಿಕಿರಣ್, ಚಂದ್ರಶೇಖರಯ್ಯ, ಎಚ್.ಎಸ್.ಸೂರ್ಯನಾರಾಯಣ, ಐಎಂಎ ಅಧ್ಯಕ್ಷ ಡಾ. ಅರುಣ್, ಡಾ. ಪರಮೇಶ್ವರ್, ವಸಂತ್ ಹೋಬಳಿದಾರ್, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್ ಕುಮಾರ್, ನಾಗವೇಣಿ, ಜಯಂತಿ ವಾಲಿ, ರವಿ ಕೋಟೋಜಿ, ಚಂದ್ರು ಹಾಗೂ ಪದಾಧಿಕಾರಿಗಳು ಇದ್ದರು.