ಜಿಲ್ಲಾ ಸುದ್ದಿತಾಜಾ ಸುದ್ದಿ

ಸುರಕ್ಷಿತ ವಾಹನ ಚಾಲನೆ ಪ್ರತಿಯೊಬ್ಬರ ಜವಾಬ್ದಾರಿ

Share Below Link

ಶಿವಮೊಗ್ಗ: ಇತ್ತೀಚಿನ ದಿನಗ ಳಲ್ಲಿ ಜನಸಂಖ್ಯೆ ಹೆಚ್ಚಿದಂತೆ ವಾಹನ ಗಳ ಸಂಖ್ಯೆಯು ಹೆಚ್ಚುತ್ತಿದ್ದು, ವಾಹನಗಳನ್ನು ಸರಿಯಾದ ರೀತಿ ಚಾಲನೆ ಮಾಡದಿರುವುದು ರಸ್ತೆ ಅಪಘಾತಗಳಿಗೆ ಹೆಚ್ಚು ಕಾರಣವಾ ಗಿದೆ. ಸುರಕ್ಷಿತ ವಾಹನ ಚಾಲನೆ ಯು ಪ್ರತಿಯೊಬ್ಬರ ಜವಾಬ್ದಾರಿ ಎಂದು ರೋಟರಿ ಜಿ ೩೧೮೨ರ ಜಿ ಗವರ್ನರ್ ಬಿ.ಸಿ.ಗೀತಾ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಶಿವಮೊಗ್ಗ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ವಾಹನ ಚಾಲನೆ ಬಗ್ಗೆ ಜಗೃತಿ ಮೂಡಿಸುವ ನಾಮ ಫಲಕ ಉದ್ಘಾಟಿಸಿ ಮಾತನಾಡಿ, ಸುರಕ್ಷಿತ ವಾಹನ ಚಾಲನೆ ಮಾಡು ವುದರಿಂದ ಅಪಘಾತ ಪ್ರಕರಣ ಗಳನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.


ರಸ್ತೆಯಲ್ಲಿ ಬೇಕಾಬಿಟ್ಟಿ ಚಾಲನೆ ಮಾಡುವುದು, ಮದ್ಯಪಾನ ಸೇವಿಸಿ ಚಾಲನೆ ಮಾಡುವುದು. ತರಬೇತಿ ಹಾಗೂ ಪರವಾನಿಗೆ ಇಲ್ಲದೆ ಚಾಲನೆ ಮಾಡುವುದು ರಸ್ತೆ ಅಪಘಾತಕ್ಕೆ ಕಾರಣವಾಗಿದೆ. ರೋಟರಿ ಜಿ ಸಂಸ್ಥೆಯು ಸಾರ್ವ ಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷಿತ ಬಗ್ಗೆ ಜಗೃತಿ ಮೂಡಿ ಸುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಸಂಚಾರಿ ಪೊಲೀಸ್ ಸಹಾಯದಿಂದ ಹಾಗೂ ಪ್ರಮುಖ ಸ್ಥಳಗಳಲ್ಲಿ ನಾಮಫಲಕ ಅಳವಡಿಸುವುದರ ಮುಖಾಂತರ ಜಗೃತಿ ನಡೆಸಲಾಗುತ್ತಿದೆ ಎಂದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯವರು ಒಳ್ಳೆಯ ಸ್ಥಳದಲ್ಲಿ ಜಗೃತಿ ಮೂಡಿಸುವ ರೇಡಿ ಯಮ್ ಇರುವ ದೊಡ್ಡ ನಾಮ ಫಲಕವನ್ನು ಅಳವಡಿಸುತ್ತಿರುವುದು ತುಂಬಾ ಸಂತೋಷವಾಗಿದೆ. ನಾಮ ಫಲಕವನ್ನು ನೆಪ್ಚೂನ್ ಆಟೋ ವರ್ಕ್ ಸಹಕಾರದಲ್ಲಿ ಅಳವಡಿಸು ತ್ತಿರುವುದು ತುಂಬಾ ಸಂತೋಷ. ಸಾರ್ವಜನಿಕರು ಕಡ್ಡಾಯವಾಗಿ ರಸ್ತೆ ನಿಯಮಗಳನ್ನು ಪಾಲಿಸ ಬೇಕು. ಚಾಲನೆ ಮಾಡುವಾಗ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಕಾರ್ ಗಳಲ್ಲಿ ಸೀಟ್ ಬೆಲ್ಟ್ ಗಳನ್ನು ಅಳವಡಿಸಿಕೊಂಡು ಚಾಲನೆ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಸಹಾ ಯಕ ಗವರ್ನರ್ ರವಿ ಕೊಟೋಜಿ ಮಾತನಾಡಿ, ಈ ವರ್ಷ ರೋಟ ರಿಯ ಜಿ ಯೋಜನೆಗಳಲ್ಲಿ ಪ್ರಮುಖವಾದ ಒಂದು ಯೋಜನೆ ರಸ್ತೆ ಸುರಕ್ಷತೆ. ಈಗಾಗಲೇ ಎ ರೋಟರಿ ಕ್ಲಬ್ ಗಳಲ್ಲಿ ಕಾರ್ಯ ಕ್ರಮಗಳನ್ನು ಮಾಡುತ್ತಾ ಜಗೃತಿ ಮೂಡಿಸುತ್ತಿzರೆ ಎಂದು ಹೇಳಿ ದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಮುಂಬರುವ ದಿನಗಳಲ್ಲಿ ರಸ್ತೆ ಸುರಕ್ಷತೆಯ ನಾಮಫಲಕಗಳನ್ನು ಬೇರೆ ಬೇರೆ ಪ್ರಮುಖ ಸ್ಥಳಗಳಲ್ಲಿ ಅಳವಡಿಸ ಲಾಗುವುದು. ರಸ್ತೆ ಸುರಕ್ಷತೆಯ ಜಗೃತಿ ಜಥಾ ಹಮ್ಮಿಕೊಳ್ಳಲಾ ಗುವುದು ಎಂದು ತಿಳಿಸಿದರು.
ಜೋನಲ್ ಲೆಫ್ಟಿನೆಂಟ್ ಧರ್ಮೇಂದ್ರ ಸಿಂಗ್ ಬಂಟಿ ಮಾತನಾಡಿದರು. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ ವಿಜಯಕುಮಾರ್, ವಸಂತ ಹೋಬಳಿದಾರ್, ವಲಯ ತರಬೇತುದಾರ ಡಾ. ಗುಡದಪ್ಪ ಕಸಬಿ, ಶ್ರೀಕಾಂತ್ ಮಹೇಶ್, ಕಾರ್ಯದರ್ಶಿ ಕಿಶೋರ್ ಕುಮಾರ್, ನಿರ್ದೇಶಕ ಸಿ ಕೆ ವಿಜಯಕುಮಾರ್, ಸಂತೋಷ್, ಕುಮಾರಸ್ವಾಮಿ, ಮಂಜುನಾಥ್, ದಿವ್ಯ ಪ್ರವೀಣ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.