ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಫೌಜಿಯಾರಿಗೆ ಸಾವಿತ್ರಿಬಾಯಿ ಪುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ

Share Below Link

ಶಿವಮೊಗ್ಗ: ಹೊಸನಗರ ತಾಲೂಕು ಮಾದಾಪುರ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಫೌಜಿಯ ಸರವತ್ ಅವರಿಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರವೀಂದ್ರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಫೌಜಿಯ ಅವರನ್ನು ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಈ ಪ್ರಶಸ್ತಿಯು ಶಿಕ್ಷಕರಿಗೆ ನೀಡುವ ಪ್ರಶಸ್ತಿಯಾಗಿದ್ದು, ನಾಡಿ ನ ಏಳಿಗೆ, ರಾಷ್ಟ್ರದ ಅಭಿವೃದ್ಧಿ, ಜಗತಿಕ ಶಾಂತಿ ನೆಲೆಸಲು ಶ್ರಮಿ ಸಿದ ಹಾಗೂ ಎಲ್ಲಾ ಆಶೋತ್ತರ ಗಳಿಗೆ ಪೂರಕವಾಗಿ ಕೆಲಸ ಮಾಡು ವವರನ್ನು ಗುರುತಿಸಿ ನೀಡಲಾದ ಪ್ರಶಸ್ತಿಯಾಗಿದೆ.
ಫೌಜಿಯ ಅವರು ಮುದ್ದಿನ ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿ ಹೊಸ ಚಿಂತನೆ, ಆಲೋಚನೆ ಗಳನ್ನು ಮಕ್ಕಳಿಗೆ ತಿಳಿಸುವ ಮೂಲಕ ಕನ್ನಡ ಶಾಲೆ ಉಳಿಸಿ ಬೆಳೆಸುವ ಮಹತ್ವಾಕಾಂಕ್ಷೆಗೆ ಇಂಬು ನೀಡುತ್ತಿ ದ್ದಾರೆ. ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ನಲಿಕಲಿ ಯೋಜನೆಯ ಸಾಕಾರಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಹೊಸತನದೊಂದಿಗೆ ಶಿಕ್ಷಣ ಕ್ಷೇತ್ರದ ಮಲ್ಯಯುತ ಪರಿವರ್ತನೆಯಲ್ಲಿ ಅವರ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.