ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಹಿರಿಯ ಇತಿಹಾಸ ತಜ್ಞ ಕೆಳದಿ ಗುಂಡಾ ಜೋಯಿಸ್ ಅಸ್ತಂಗತ…

Share Below Link

ಕೆಳದಿ ಗುಂಡಾ ಜೋಯಿಸ್ ಎಂದೇ ಹೆಸರಾಗಿರುವ ಇವರು ಕರ್ನಾಟಕದ ಪ್ರಮುಖ ಹಾಗೂ ಹಿರಿಯ ಇತಿಹಾಸ ತಜ್ಞರು. ವಿಶೇಷವಾಗಿ ಕೆಳದಿ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ ಸಂಶೋಧನಾ ಕಾರ್ಯಗಳಿಂದ ಪ್ರಸಿದ್ಧರಾಗಿzರೆ. ಹಳೆಯ ಕಾಲದ ಮೋಡಿ ಲಿಪಿಯನ್ನು, ತಾಳೆಗರಿ ಗ್ರಂಥಗಳನ್ನು ಓದಬಲ್ಲ ಕೆಲವೇ ಕೆಲವು ತಜ್ಞರಲ್ಲಿ ಇವರು ಒಬ್ಬರು.
ಜನನ : ಕೆಳದಿಯ ಶ್ರೀ ಗುಂಡಾ ಜೋಯಿಸರು ೧೯೩೧ ಸೆಪ್ಟಂಬರ್ ೨೭ರಂದು ಕೆಳದಿಯಲ್ಲಿ ಜನಿಸಿದರು. ಇವರ ತಾಯಿ ಮೂಕಾಂಬಿಕಾ – ತಂದೆ ನಂಜುಂಡ ಜೋಯಿಸರು. ಇವರ ನಿಜನಾಮ ಲಕ್ಷ್ಮೀನಾರಾಯಣ. ಇವರ ಮೇಲಿನ ಎರಡು ಮಕ್ಕಳು ತೀರಿಕೊಂಡಿದ್ದರಿಂದ ಇವರಾದರೂ ಕಲ್ಲುಗುಂಡಿನಂತೆ ಬದುಕಲಿ ಎಂದು ಇವರ ಅಜ್ಜಿ ಇವರಿಗೆ ಗುಂಡಾ ಎಂದು ಕರೆದಳು!
ಶಿಕ್ಷಣ : ಜೋಯಿಸರ ಪ್ರಾಥಮಿಕ ಶಿಕ್ಷಣ ಹುರಳಿ, ಕೆಳದಿ, ಸೊರಬ ಹಾಗು ಸಾಗರದಲ್ಲಿ ನಡೆಯಿತು. ಪ್ರೌಢಶಾಲಾ ವಿದ್ಯಾಭ್ಯಾಸವು ಬೆಂಗಳೂರಿನ ಕೋಟೆ ಪ್ರೌಢಶಾಲೆಯಲ್ಲಿ ನಡೆಯಿತು. ಎಸ್.ಎಸ್.ಎಲ್.ಸಿ. ನಂತರ ಜೋಯಿಸರು ವಿದ್ಯಾಭ್ಯಾಸವನ್ನು ಮುಕ್ತಾಯಗೊಳಿಸಿ ಉದ್ಯೋಗ ವನ್ನು ಅರಸಬೇಕಾಯಿತು. ಆದರೆ ಸುಮಾರಾಗಿ ತಮ್ಮ ೫೦ನೇ ವಯಸ್ಸಿನಲ್ಲಿ ಜೋಯಿಸರು ಮೈಸೂರು ವಿಶ್ವವಿದ್ಯಾನಿಲಯದ ಅಂಚೆ ತೆರಪಿನ ಶಿಕ್ಷಣದ ಮೂಲಕ ಎಂ.ಎ. (ಇತಿಹಾಸ) ಪದವಿ ಯನ್ನು ಪಡೆದರು. ಇದಲ್ಲದೆ ಬೆಂಗಳೂರಿನ ಕರಣಿಕರ ವೇದಶಾಲೆಯಲ್ಲಿ ವೇದಾಭ್ಯಾಸವನ್ನು ಮಾಡಿzರೆ. ಕನ್ನಡ ಪಂಡಿತ, ಆಗಮ ವೇದ ವಿದ್ವಾನ್, ಕನ್ನಡ ರತ್ನ, ಹಿಂದಿ ಪ್ರಬೋಧ ಪರೀಕ್ಷೆಗಳಲ್ಲಿಯೂ ತೇರ್ಗಡೆಯಾಗಿzರೆ.
ವೃತ್ತಿ : ಗುಂಡಾ ಜೋಯಿಸರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿzರೆ. ಗ್ರಾಮಲೆಕ್ಕಿಗರಾಗಿ, ಪೋಸ್ಟ್ ಮಾಸ್ಟರ್ ಆಗಿ, ವಿದ್ಯುತ್ ಇಲಾಖೆಯಲ್ಲಿ, ಆಕಾಶವಾಣಿ ಯಲ್ಲಿ, ವಯಸ್ಕರ ಶಿಕ್ಷಣ ಸಮಿತಿ ಯಲ್ಲಿ, ಕನ್ನಡ ಸಂಸ್ಕೃತಿ ಪ್ರಸಾರದ ಉಪನ್ಯಾಸಕರಾಗಿ, ಶಿವಮೊಗ್ಗದ ಸರಕಾರಿ ವಸ್ತು ಸಂಗ್ರಹಾಲಯದ ಸರ್ವೇಕ್ಷಣಾಧಿಕಾರಿಯಾಗಿ, ಗೋವಾ ಪರ್ತಗಾಳಿ ಮಠದಲ್ಲಿ ಸಂಶೋಧನೆ ನಡೆಸಲು ರಾಜ್ಯ ದಿಂದ ನಿಯುಕ್ತರಾಗಿ, ತಮಿಳುನಾಡಿಗೆ ಸರ್ಕಾರದ ಸಾಂಸ್ಕೃತಿಕ ನಿಯೋಗಿಯಾಗಿ, ರಾಜ್ಯ ಪತ್ರಾಗಾರ ಇಲಾಖೆಯಲ್ಲಿ ಉಪನ್ಯಾಸಕರಾಗಿ, ರಾಜ್ಯದ ಚಾರಿತ್ರಿಕ ಸರ್ವೇಕ್ಷಣ ಸಮಿತಿಯ ಸದಸ್ಯರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಕರಾಗಿ, ಕೆಳದಿ ದೇವಾಲಯದ ಉಚ್ಚಾಧಿಕಾರಿ ಸದಸ್ಯರಾಗಿ ಕಾರ್ಯ ನಿರ್ವಹಿಸಿzರೆ.
೧೯೬೨ ರಿಂದ ೧೯೭೫ರವರೆಗೆ ಮೈಸೂರು ಹಾಗೂ ಧಾರವಾಡದ ವಿಶ್ವವಿದ್ಯಾಲಯಗಳಲ್ಲಿ ಇತಿಹಾಸದ ಪ್ರಾಧ್ಯಾಪಕರು, ೧೯೮೦ ರಿಂದ ೧೯೮೫ರವರೆಗೆ ಕರ್ನಾಟಕ ಇತಿಹಾಸ ದಾಖಲೆ ಸಂಶೋದನಾ ಸಮಿತಿಯ ಸದಸ್ಯರು ಆಗಿದ್ದರು.
ಪ್ರವೃತ್ತಿ : ೧೯೪೮ ರಿಂದಲೇ ಅಂದರೆ ತಮ್ಮ ೧೭ನೇ ವಯಸ್ಸಿ ನಿಂದಲೇ ಜೋಯಿಸರು ಕೆಳದಿಯ ಇತಿಹಾಸದ ಸಂಶೋಧನೆಯನ್ನು ಮಾಡುತ್ತಿzರೆ.
೧೯೬೦ರಲ್ಲಿ ತಮ್ಮ ಮನೆಯ ಲ್ಲಿಯೇ ಐತಿಹಾಸಿಕ ವಸ್ತು ಸಂಗ್ರಹಾಲಯ ಪ್ರಾರಂಭಿಸಿದರು. ೧೯೭೮ರಲ್ಲಿ ಒಂದು ವಿಶ್ವಸ್ಥ ಸಮಿತಿ ಯನ್ನು ಮಾಡಿದರು. ಈ ಸಂಗ್ರಹಾಲಯವನ್ನು ೧೯೮೯ರ ನಂತರ ಸರ್ಕಾರಕ್ಕೆ ಒಪ್ಪಿಸಿದರು. ಈ ಸಂಗ್ರಹಾಲಯದಲ್ಲಿ ೨೬೦೦ ತಾಳೆಗರಿ ಗ್ರಂಥಗಳಲ್ಲದೆ ಐತಿಹಾಸಿಕ ಮಹತ್ವದ ಶಾಸನಗಳು ಹಾಗೂ ಇತರ ವಸ್ತುಗಳಿವೆ. ಕೆಳದಿಯ ಇತಿಹಾಸ ಸಂಗ್ರಹಕ್ಕಾಗಿ ಊರೂರು ಅಲೆದರು. ಲಂಡನ್, ಅಸ್ಯನ್ ಹಾಗು ಇಟಲಿ ಯಲ್ಲಿರುವ ಗ್ರಂಥಾಲಯ ಹಾಗೂ ವಸ್ತು ಸಂಗ್ರಹಾಲಯಗಳಿಗೆ ಭೇಟಿ ಕೊಟ್ಟರು. ಅನೇಕ ಜನ ಗ್ರಾಮಸ್ಥರನ್ನು ಹಾಗೂ ವಿದ್ವಾಂಸರನ್ನು ಸಂಪರ್ಕಿಸಿ ದರು. ಕೆಳದಿಯ ಇತಿಹಾಸಕ್ಕೆ ಸಂಬಂಧಿಸಿದಂತೆ ಅನೇಕ ಲೇಖನ ಗಳನ್ನು ಬರೆದಿzರೆ. ಅನೇಕ ಲೇಖಕರಿಗೆ ಸಹಾಯ ಮಾಡಿzರೆ. ಕೆಲವೊಂದು ಗ್ರಂಥಗಳನ್ನು ಸಂಪಾದಿಸಿzರೆ. ಹುಬ್ಬಳ್ಳಿಯ ಮೂರು ಸಾವಿರ ಮಠದ ಪ್ರಾಚೀನ ಓಲೆಗರಿ ಹಸ್ತಪ್ರತಿ ಸೂಚಿಯನ್ನು ತಯಾರಿಸಿzರೆ.
ಇವರ ಕೃತಿಗಳು : ನಿಷ್ಕಳಂಕಿಣಿ ಕೆಳದಿ ವೀರಮ್ಮಾಜಿ, ಕೆಟಲಾಗ್ ಆಫ್ ಏನ್ಷಿಯಂಟ್ ತಿಗಳಾರಿ ಪಾಮ್ ಲೀಫ್, ಇತಿಹಾಸ ವೈಭವ, ಕೆಳದಿಯ ಸಂಕ್ಷಿಪ್ತ ಇತಿಹಾಸ, ಇಕ್ಕೇರಿ ಅರಸರು, ಬಿದನೂರಿನ ಕೆಳದಿ ನಾಯಕರು, ಕೆಳದಿಯ ವೆಂಕಣ್ಣಯ್ಯ ಕವಿಯ ಕೀರ್ತನೆಗಳು, ಲಿಂಗಣ್ಣ ಕವಿಯ ಕೆಳದಿ ನಪವಿಜಯ, ಕೆಳದಿ ಅರಸರು.
ಕೃತಿಗಳು, ಸಾಧನೆಗಳು : ಗುಂಡಾ ಜೋಯಿಸರು ೩೦ಕ್ಕೂ ಹೆಚ್ಚು ಇತಿಹಾಸ ಸಂಶೋಧನೆಯ ಕೃತಿಗಳು, ೨೫೦ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು, ಲೇಖನಗಳನ್ನು ಪ್ರಕಟಿಸಿzರೆ. ಇವರ ಎ ಕೃತಿಗಳು ದಾಖಲೆಗಳನ್ನು ಆಧರಿಸಿದ್ದು ಸತ್ಯಶೋಧನೆಯ ಫಲಗಳಾಗಿವೆ. ಹೆಚ್ಚಿನ ಕತಿಗಳು ಕೆಳದಿ ಅರಸರು, ಅವರ ಕಾಲದ ಇತಿಹಾಸ, ಸಾಹಿತ್ಯಗಳಿಗೆ ಸಂಬಂಧಿಸಿವೆ. ಇವರ ೧೭ನೇ ಶತಮಾನದ ಕವಿ ಲಿಂಗಣ್ಣ ರಚಿಸಿದ ಕೆಳದಿನಪ ವಿಜಯಕಾವ್ಯದ ಸರಳ ಗದ್ಯ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ ಪ್ರಕಟಿಸಿದೆ. ಅದು ಈಗಾಗಲೇ ಮೂರು ಮುದ್ರಣಗಳನ್ನು ಕಂಡಿದೆ. ಹಿಂದಿ ಮತ್ತು ಇಂಗ್ಲಿಷ್‌ಗೂ ಅನುವಾದಗೊಂಡಿದೆ. ಅನೇಕ ರಾಷ್ಟ್ರೀಯ ಮತ್ತು ಆರು ಅಂತರ ರಾಷ್ಟ್ರೀಯ ಸೆಮಿನಾರುಗಳಲ್ಲಿ ಭಾಗವಹಿಸಿzರೆ.
ಪುರಸ್ಕಾರ, ಗೌರವಗಳು : ೧೯೯೪ರಲ್ಲಿ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ. ಕರ್ನಾಟಕ ರಾಜ್ಯ ಸರ್ಕಾರವು ೧೯೯೫ರಲ್ಲಿ ಶ್ರೇಷ್ಠ ಸಂಶೋಧಕರೆಂದು ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ೨೦೦೪ರಲ್ಲಿ ಹೊನ್ನಾಳಿಯಲ್ಲಿ ನಡೆದ ಕರ್ನಾಟಕ ಇತಿಹಾಸ ಅಕಾಡೆಮಿ ವಾರ್ಷಿಕ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
೨೦೦೩ರಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೆಟ್ ಪದವಿ, ಸ್ವೀಡನ್ ವಿಶ್ವ ವಿದ್ಯಾಲಯದಿಂದ ಸ್ಕ್ರಿಪ್ಟ್ ಎಕ್ಸ್‌ಪರ್ಟ್ ಬಿರುದು ಪಡೆದಿzರೆ.
ಇಂತಹ ಹಿರಿಯ ಚೇತನ ಕೆಳದಿ ಗೂಂಡಾ ಜೋಯಿಸರು ಜೂನ್ ೨ರ ಭಾನುವಾರ ವಯೋಸಹಜ ಖಾಯಿಲೆಯಿಂದ ಇಹಲೋಕ ತ್ಯಜಿಸಿದ್ದು, ಕೆಳದಿ ಗೂಂಡಾ ಜೋಯಿಸರ ನಿಧನಕ್ಕೆ ಹೊಸನಾವಿಕ ಪತ್ರಿಕಾ ಬಳಗ ಕಂಬನಿ ಮಿಡಿದಿದೆ.
-ಮುರುಳೀಧರ್ ಹೆಚ್ ಸಿ, ಪತ್ರಕರ್ತರು, ಶಿವಮೊಗ್ಗ.