ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕಾರಿಪುರ: ಅನುತ್ಪಾದಕ ರಾಸುಗಳ ವಿಶೇಷ ಆರೋಗ್ಯ ತಪಾಸಣೆ

Share Below Link

ಶಿವವಗ್ಗ: ಜಾನುವಾರುಗಳ ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರ ಮತ್ತು ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ವತಿಯಿಂದ ಹಮ್ಮಿಕೊಂಡ ಕೃಷಿ ಇಲಾಖೆಯ ಸಾವಯವ ಸಿರಿ ಯೋಜನೆಯಡಿ ಗೋಗರ್ಭ ಯೋಜನೆಯ ಕಾರ್ಯಕ್ರಮವನ್ನು ಪಶುವೈದ್ಯಕೀಯ ಸೇವಾ ಇಲಾಖೆ, ಕೃಷಿ ಇಲಾಖೆ, ಮತ್ತು ಹಾಲು ಉತ್ಪಾದಕರ ಸಹಕಾರ ಸಂಘ, ಕಾಗಿನೆಲ್ಲಿ ಗ್ರಾಮ ಇವರ ಸಹಯೋಗದೊಂದಿಗೆ ಜನುವಾರುಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಶಿಕಾರಿಪುರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ: ರವಿಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಜಿ.ಸಿ. ಪೂರ್ಣಿಮಾ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ, ಶಿಕಾರಿಪುರ ಸಹಾಯಕ ನಿರ್ದೇಶಕ ಕಿರಣ್ ಕುಮಾರ್ ಹರ್ತಿ, ಕೃಷಿ ಅಧಿಕಾರಿ ಕೆ. ನಾಗಪ್ಪ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ರಿವಾರ್ಡ್ ಯೋಜನೆ ಪ್ರವೇಶ ದ್ವಾರ ಚಟುವಟಿಕೆಯಡಿ ಅವಶ್ಯಕ ಖನಿಜ ಮಿಶ್ರಣ ಮತ್ತಿತರ ಔಷಧ ನೀಡಿ ಸಹಕರಿಸಿದರು.
ಕಾರ್ಯಕ್ರಮದಲ್ಲಿ ಸಾವಯವ ಸಿರಿ ಯೋಜನೆಯ ಪ್ರಧಾನ ಸಂಶೋಧಕ ಮತ್ತು ಪ್ರಾಧ್ಯಾಪಕ ಡಾ: ಎನ್.ಬಿ.ಶ್ರೀಧರ, ಡಾ: ಸಂತೋಷ್ ಶಿಂಧೆ ಮತ್ತು ಡಾ: ರುದ್ರೇಶ್ ತಜ್ಞರಾಗಿ ಅನುತ್ಪಾದಕ ರಾಸುಗಳ ತಪಾಸನೆ ಮತ್ತು ಚಿಕಿತ್ಸೆಯಲ್ಲಿ ಭಾಗವಹಿಸಿದರು.
ಶಿಕಾರಿಪುರದ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾ ಖ್ಯೆಯ ಇಲಾಖೆಯ ಪಶುವೈದ್ಯಾಧಿಕಾರಿಗಳಾದ ಡಾ: ಸುನಿಲ್ ಕುಮಾರ್ ಕೆ. ಎಂ.,ಡಾ: ಹರೀಶ್, ಡಾ: ಸಂತೋಶ್, ಡಾ: ಶಿವಕುಮಾರ್, ತ್ಯಾಗರಾಜ್, ಚೇತನ್,ಸಂತೋಷ್ ಪಾಲ್ಗೊಂಡಿದ್ದರು. ವಿವಿಧ ಕಾರಣಗಳಿಂದ ಅನುತ್ಪಾದಕವಾಗಿ ರುವ ಒಟ್ಟು ೮೬ ರಾಸುಗಳಿಗೆ ವಿಶೇಷ ಚಿಕಿತ್ಸೆ ನೀಡಲಾಯಿತು. ರೈತರಿಗೆ ಆಧುನಿಕ ಪಶುಪಾಲನೆಯ ಬಗ್ಗೆ ಗೋಪಾಲ ಗೋಷ್ಟಿಯ ಮೂಲಕ ಮಾಹಿತಿ ನೀಡಲಾಯಿತು ಹಾಗೂ ರೈತರಿಗೆ ನಿಗದಿತ ಸಮಯದಲ್ಲಿ ತಜ್ಞರು ಸೂಚಿಸಿದ ಚಿಕಿತ್ಸೆಯನ್ನು ಜನುವಾರುಗಳಿಗೆ ಮಾಡಿಸಿ ಅವುಗಳನ್ನು ಉತ್ಪಾದನೆಯತ್ತ ಸಾಗುವಂತೆ ಮಾಡಬೇಕೆಂದು ಮನವರಿಕೆ ಮಾಡಿಕೊಡಲಾಯಿತು.
ವಿವಿಧ ಗ್ರಾಮಗಳಲ್ಲಿ ಈ ಬಗೆಯ ೨೨೩ ವಿಶೇಷ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಈ ವರೆಗೆ ಸರಾಸರಿ ೯೭೭೪ ಜನುವಾರು ಗಳನ್ನು ಚಿಕಿತ್ಸಾ ಮಾಡಿದ್ದು ಅವುಗಲ್ಲಿ ಶೇ:೭೩.೫೪ ರಷ್ಟು ರಾಸುಗಳು ಗರ್ಭಧರಿಸಿವೆ ಎಂಬುದು ಇಲ್ಲಿ ಗಮನಿಸಬೇಕಾದ ಅಂಶವಾಗಿದೆ.