ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಶಕ್ತಿ ನಾಮಕರಣ: ವಿeನ, ಆಧ್ಯಾತ್ಮದ ಸಮ್ಮಿಲನ : ಬೊಮ್ಮಾಯಿ

Share Below Link

ಬೆಂಗಳೂರು: ಚಂದ್ರನ ಅಂಗಳ ದಲ್ಲಿ ಸೆಟಲೈಟ್ ಸ್ಪರ್ಶ ಮಾಡಿದ ಸ್ಥಳಕ್ಕೆ ಶಿವಶಕ್ತಿ ಎಂದು ಪ್ರಧಾನಿ ಮೋದಿ ನಾಮಕರಣ ಮಾಡುವ ಮೂಲಕ ವಿeನ ಮತ್ತು ಆಧ್ಯಾತ್ಮ ವನ್ನು ಒಗ್ಗೂಡಿಸಿzರೆ ಎಂದು ಮಾಜಿ ಸಿಎಂ ಬೊಮ್ಮಾಯಿ ಅಭಿಪ್ರಾಯ ಪಟ್ಟಿzರೆ.
ಶೋಭಾ ನಾಗಸಂದ್ರ ಅಪಾರ್ಟ್‌ಮೆಂಟ್ ವೆಲ್ ಫೇರ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಂದ್ರಯಾನ-೩ ಯಶಸ್ವಿ ಉಡಾವಣೆಗೆ ಕಾರಣರಾದ ವಿeನಿ ಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಇಸ್ರೊ ವಿeನಿಗಳ ನಿರಂತರ ಧಣಿವಿಲ್ಲದ ಶ್ರಮದ ಫಲವಾಗಿ ಭಾರತ ವಿಶ್ವ ಮಟ್ಟದಲ್ಲಿ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವಂತಾಗಿದೆ ಎಂದರು.
ಕರ್ನಾಟಕ ವಿeನ, ತಂತ್ರeನ ಕೃಷಿ ಸೇರಿದಂತೆ ಎಲ್ಲ ರಂಗಗಳಲ್ಲೂ ಮುಂಚೂಣಿಯ ಲ್ಲಿದ್ದು, ನಮ್ಮ ಸರ್ಕಾರ ಅಗತ್ಯ ನೆರವು ನೀಡಿತ್ತು ಎಂದು ಹೇಳಿದರು.
ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮನ್ವಯತೆಯಿಂದ ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ದೊರೆಯುವಂತಾ ಯಿತು ಎಂದರು.
ಇಸ್ರೋ ವಿeನಿಗಳ ಒಗ್ಗಟ್ಟಿನ ಶ್ರಮದ ಫಲವಾಗಿ ಚಂದ್ರಯಾನ ೩ ಯಶಸ್ವಿಯಾಗಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಘನತೆ ಹೆಚ್ಚಾಗುವಂತೆ ಮಾಡಿದ್ದಲ್ಲದೇ ವಿeನ ಮತ್ತು ಆಧ್ಯಾತ್ಮವನ್ನೂ ಬೆಸೆಯುವಂತೆ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ವಿeನಿಗಳಾದ ಮನೀಷ್ ಚಾವ್ಲ, ಶ್ರೀಮತಿ ಕಲ್ಪನಾ ಅರವಿಂದ್, ಆಕಾಂಕ್ಷ ಭಾರದ್ವಾಜನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ದಾಸರಹಳ್ಳಿ ಶಾಸಕ ಮುನಿರಾಜು, ಶುಭ ನಾಗಸಂದ್ರ ಅಪಾರ್ಟ್ಮೆಂಟ್ ಅಧ್ಯಕ್ಷ ಚಂದ್ರಶೇಖರ ಬೆಳಗೆರೆ ಹಾಗು ಮತ್ತಿತರರು ಹಾಜರಿದ್ದರು.