ಜಿಲ್ಲಾ ಸುದ್ದಿತಾಜಾ ಸುದ್ದಿ

ಶೀಘ್ರವೇ ಕೆ.ಪಿ.ಎಸ್. ಮಾದರಿ ಶಾಲೆಗಳ ಆರಂಭಕ್ಕೆ ಚಿಂತನೆ : ಮಧು ಬಂಗಾರಪ್ಪ

Share Below Link

ಸೊರಬ: ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸುಮಾರು ೫೦೦- ೬೦೦ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಿದೆ ಎಂದು ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.
ಜಿಡಳಿತ, ಜಿಪಂ, ಶಿಕ್ಷಣ ಇಲಾಖೆ, ವಿವಿಧ ಸಂಘಟನೆಗಳ ಆಶ್ರಯದಲ್ಲಿ ಡಾ.ರಾಜ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಅಂತೆಯೇ ರಾಜ್ಯದ ಪ್ರತಿ ಗ್ರಾಪಂಗೆ ಒಂದರಂತೆ ಮಾದರಿ ಶಾಲೆಗಳನ್ನು ಆರಂಭಿಸಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.
ಈ ಶಾಲೆಗೆ ಗ್ರಾಪಂ ವ್ಯಾಪ್ತಿಯ ಆಸಕ್ತ ಮಕ್ಕಳನ್ನು ದಾಖಲು ಮಾಡಿಕೊಂಡು ತರಗತಿಗಳಿಗೆ ಕರೆತರುವ ಹಾಗೂ ತರಗತಿ ಮುಗಿದ ನಂತರ ಬಿಟ್ಟು ಬರಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದ ಯಶಸ್ವಿ ಅನುಷಾ ನಕ್ಕೆ ಸ್ಥಳೀಯರ ಸಹಕಾರವನ್ನು ಪಡೆಯಲಾಗುವುದು ಎಂದರು.
ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರಲು ವಿನೂತನ ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಈ ವಿಶೇಷ ಪ್ರಯತ್ನದ ಫಲವಾಗಿ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿ ಗಳಿಗೆ ೨ನೇ ಬಾರಿಗೆ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಿದ ಪರಿಣಾಮವಾಗಿ ಪರೀಕ್ಷೆಗೆ ಹಾಜರಾದ ಸುಮಾರು ೧೧೯೦೦೦ ಮಕ್ಕಳ ಪೈಕಿ ೪೧೦೦೦ ಮಕ್ಕಳು ಉತ್ತೀರ್ಣರಾಗಿ ಶಿಕ್ಷಣದ ಮುಖ್ಯವಾಹಿನಿಗೆ ಬರುವಂತೆ ಆಗಿದೆ ಎಂದರು.
ಈ ರೀತಿ ಅವಕಾಶ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಶಾಲಾ ದಾಖಲಾತಿಗೆ ಸೂಚಿಸಲಾಗಿದೆ ಅಲ್ಲದೆ ಈಗಾಗಲೇ ಪೂರ್ಣ ಗೊಂಡ ಪಾಠಗಳ ಪುನರಾವರ್ತನೆ ಮಾಡಲು ಸೂಚಿಸಲಾಗಿದೆ ಎಂದರು.
ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಪೋಷಕರು ಮಕ್ಕಳನ್ನು ತಮ್ಮ ಮಡಿಲಿಗೆ ಹಾಕಿzರೆ. ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸುವಂತೆ ಕಿವಿಮಾತು ಹೇಳಿದರು.
ವಿಧಾನ ಪರಿಷತ್ ಸದಸ್ಯೆ ಭಾರತಿಶೆಟ್ಟಿ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಡಯಟ್ ಪ್ರಾಂಶುಪಾಲ ಬಸವರಾಜಪ್ಪ ಬಿ.ಇ.ಓ. ಸತ್ಯನಾರಾಯಣ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.