ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಸಿದ್ದತೆ: ಡಿಸಿ

Share Below Link

ಶಿವಮೊಗ್ಗ: ೨೦೨೩ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಜಿಯಲ್ಲಿ ಜೂನ್ ೧೨ ರಿಂದ ೧೯ ರವರೆಗೆ ನಡೆಯ ಲಿದ್ದು ಸುವ್ಯವಸ್ಥಿತ ಮತ್ತು ಶಾಂತಿ ಯುತವಾಗಿ ಪರೀಕ್ಷೆಗಳನ್ನು ನಡೆ ಸಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗ ಳಿಗೆ ಜಿಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.
ಶುಕ್ರವಾರ ಜಿಡಳಿತ ಕಚೇ ರಿ ಸಭಾಂಗಣದಲ್ಲಿ ಎಸ್‌ಎಸ್ ಎಲ್‌ಸಿ ಪೂರಕ ಪರೀಕ್ಷೆಯ ಪೂರ್ವಸಿದ್ದತೆ ಕುರಿತು ಅಧಿಕಾರಿಗ ಳೊಂದಿಗೆ ಚರ್ಚಿಸಲು ಕರೆಯಲಾ ಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸೂಚನೆಗಳನ್ನು ನೀಡಿದರು.
ಒಟ್ಟು ೩೫೨೩ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿ ಸಿಕೊಂಡಿದ್ದು, ಜಿಯ ಒಟ್ಟು ೧೪ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜೂನ್ ೧೨ ರಂದು ಪ್ರಥಮ ಭಾಷೆ, ಜೂ.೧೩ ರಂದು ವಿeನ, ಜೂ.೧೪ ರಂದು ದ್ವಿತೀಯ ಭಾಷೆ, ಜೂನ್ ೧೫ ಸಮಾಜ ವಿeನ, ಜೂನ್ ೧೬ ರಂದು ತೃತೀಯ ಭಾಷೆ, ಜೂನ್ ೧೭ ರಂದು ಗಣಿತ, ಜೂನ್ ೧೯ ರಂದು ಇತರೆ ಕೋರ್ ವಿಷಯಗಳ ಪರೀಕ್ಷೆ ನಡೆಯಲಿದೆ.

ಈಗಾಗಲೇ ೧೪ ಮುಖ್ಯ ಅಧೀಕ್ಷಕರರು, ೧೪ ಜನ ಸ್ಥಾನಿಕ ಜಗೃ ತ ದಳ ಅಧಿಕಾರಿ, ೭ ಜನ ಮಾಗಾ ಧಿಕಾರಿ, ೭ ಮೊಬೈಲ್ ಸ್ವಾಧೀನಾಧಿಕಾರಿ, ೯ ಜನ ವೀಕ್ಷಕರನ್ನು ನೇಮಿಸಲಾಗಿದೆ. ಹಾಗೂ ಕೊಠಡಿ ಮೇಲ್ವಿಚಾರಕು, ಸಿಬ್ಬಂದಿ ನಿಯೋ ಜನೆ ಆಗಿದ್ದು, ಪರೀಕ್ಷಾ ಕೇಂದ್ರ ಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿ ಗೆ ಅವಕಾಶವಿರುವುದಿಲ್ಲ.
ಪರೀಕ್ಷಾ ದಿನಗಳಂದು ಯಾ ವುದೇ ಅಹಿತರ ಘಟನೆಗಳಿಗೆ ಅವ ಕಾಶ ನೀಡದಂತೆ ಮುಂಜಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀ. ಫಾಸಲೆಯವರೆಗೆ ಸಿಆರ್‍ಪಿಸಿ ಸೆಕ್ಷನ್ ೧೪೪ ರನ್ವಯ ನಿಷೇಧಾe ಜರಿಗೊಳಿಸಿ ಆದೇಶಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನ/ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿ, ಒದಗಿ ಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕಾರ್ಯನಿರ್ವಹಣೆ ಖಾತರಿಪಡಿಸಿಕೊಳ್ಳಬೇಕು ಎಂದ ಅವರು ಸುವ್ಯವಸ್ಥಿತವಾಗಿ ಪರೀಕ್ಷೆ ಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಬಗ್ಗೆ ಸೂಚನೆ ನೀಡಿ ದರು.ಡಿಡಿಪಿಐ ಸಿ.ಆರ್. ಪರ ಮೇಶ್ವರಪ್ಪ ಮಾತನಾಡಿ, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗ ಸೂಚಿಗಳ ಕುರಿತು ವಿವರಿಸಿದರು.
ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಡಯಟ್ ಪ್ರಾಚಾರ್ಯ ಬಸವ ರಾಜಪ್ಪ, ಶಿಕ್ಷಣಾಧಿಕಾರಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.