ಜಿಲ್ಲಾ ಸುದ್ದಿತಾಜಾ ಸುದ್ದಿ

ವಿದ್ಯಾರ್ಥಿಗಳನ್ನು ಸನ್ಮಾರ್ಗದಲ್ಲಿ ಮುನ್ನಡೆಸುವವರು ಶಿಕ್ಷಕರು:ಸಿ.ರಾಜು

Share Below Link

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸನ್ಮಾರ್ಗದಲ್ಲಿ ಮುನ್ನಡೆ ಯುವಂತೆ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳು ವಂತೆ ಮಾರ್ಗದರ್ಶನ ನೀಡುವ ವರು ಶಿಕ್ಷಕರು ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಸಿ.ರಾಜು ಹೇಳಿದರು.
ಜಿ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಹ ಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ದಲ್ಲಿ ಮಾತನಾಡಿ, ತಂತ್ರeನದ ನೆರವಿನಿಂದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡುವಲ್ಲಿ ಶಿಕ್ಷಕರು, ಉಪನ್ಯಾ ಸಕರು ಕಾರ್ಯ ನಿರ್ವಹಿಸುತ್ತಿ zರೆ. ಶಿಕ್ಷಕರ ಉತ್ತಮ ಕೆಲಸ ದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯು ನಿರಂ ತರವಾಗಿ ಸಮಾಜಮುಖಿ ಕಾರ್ಯ ಕ್ರಮಗಳನ್ನು ನಡೆಸಿ ಕೊಂಡು ಬರುತ್ತಿದ್ದು, ಶಿಕ್ಷಕರ ದಿನಾಚರ ಣೆಯ ವಿಶೇಷ ಗೌರವ ಸಲ್ಲಿಸುವ ಆಶಯದಿಂದ ಇಂತಹ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸೇವಾ ಕಾರ್ಯಕ್ರಮ ಗಳನ್ನು ರೋಟರಿ ಸಂಸ್ಥೆ ನಡೆಸುತ್ತಿದೆ ಎಂದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯ ರಶ್ಮಿ ಹಾಗೂ ಮಂಜುಳಾ ರಾಜು ಉಪನ್ಯಾಸ ಕರಿಗೆ ವಿಶೇಷ ಆಟಗಳನ್ನು ಅಡಿಸಿ ದರು. ಉಪನ್ಯಾಸಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದು ವಿಶೇಷ ಆಗಿತ್ತು. ಮಹಿಳಾ ಶಿಕ್ಷಕರು ಸಹದ್ಯೋಗಿ ಮಿತ್ರರಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಶಿಕ್ಷಕರಿಗೆ ಕಿರುಕಾಣಿಕೆ ನೀಡಲಾಯಿತು. ಪ್ರಾಚಾರ್ಯ ಬಸವರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ದರು. ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯ ಮಂಜುಳಾ ರಾಜು, ಮನೋಹರ್, ರಶ್ಮಿ ಸೇರಿ ದಂತೆ ಪದಾಧಿಕಾರಿಗಳು, ಉಪ ನ್ಯಾಸಕರು, ಸಿಬ್ಬಂದಿ ಇದ್ದರು.