ಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರತಿದಿನ ಬೆಳಗ್ಗೆ ಪ್ರತಿ ಮನೆಯ ಸೇವೆ ಮಾಡುವ ಪೌರ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲಾಗದು : ಎಂ. ಶ್ರೀಕಾಂತ್

Share Below Link

ಶಿವಮೊಗ್ಗ: ಪ್ರತಿದಿನ ಬೆಳಗ್ಗೆ ಪ್ರತಿ ಮನೆಯ ಸೇವೆ ಮಾಡುವ ಪೌರ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲಾಗುವುದಿಲ್ಲ ಎಂದು ಸಮಾಜಸೇವಕ ಎಂ. ಶ್ರೀಕಾಂತ್ ಹೇಳಿದ್ದಾರೆ.
ಅವರು ಇಂದು ನಗರದ ವೀರಶೈವ ಕಲ್ಯಾಣ ಮಂದಿರಲ್ಲಿ ಸದ್ಭಾವನಾ ಎಜುಕೇಷನಲ್ ಮತ್ತು ಚಾರಿಟೆಬಲ್ ಟ್ರಸ್ಟ್ ವತಿಯಿಂದ ಎಂ. ಶ್ರೀಕಾಂತ್ ನೇತೃತ್ವದಲ್ಲಿ ಶಿವ ಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ಪೌರ ಕಾರ್ಮಿಕರಿಗೆ ಗೌರಿ ಗಣೇಶ ಹಬ್ಬದ ಬಾಗಿನ ವಿತರಿಸಿ ಮಾತನಾಡಿದರು.
ಇದು ಕಳೆದ ಎರಡು ವರ್ಷ ಗಳಿಂದ ನಿಮ್ಮೆಲ್ಲರ ಸಹೋದರ ನಾಗಿ ಈ ಕಾರ್ಯಕ್ರಮ ನಡೆಸುತ್ತಾ ಬಂದಿದ್ದೇನೆ. ಸ್ವಚ್ಛತೆಯ ನಿಮ್ಮ ಶ್ರಮಕ್ಕೆ ಬೆಲೆ ಕಟ್ಟಲಾಗುವುದಿಲ್ಲ. ನಿಮಗೆ ಎಷ್ಟೇ ಕಷ್ಟ ಬರಲಿ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರೂ ನಿಮ್ಮಂತೆ ಪೌರ ಕಾರ್ಮಿಕರಾಗುವುದು ಬೇಡ ಎಂದರು. ನನಗೆ ಪೌರ ಕಾರ್ಮಿಕರ ಒಡನಾಟ ಇದೆ. ಮತ್ತು ಅವಕ ಕಷ್ಟದ ಅರಿವಿದೆ. ನನಗೆ ಯಾವುದೇ ಅಧಿಕಾರ ಇಲ್ಲದಿದ್ದರೂ ಬಡವರ ಸೇವೆ ಮಾಡುತ್ತಾ ಬಂದಿದ್ದೇನೆ. ರಾಜಕಾರಣ ತನ್ನ ಸ್ವಾರ್ಥಕ್ಕಾಗಿ ಮಾಡಬಾರದು. ಬಡವರ ಹಿತ ಕ್ಕಾಗಿ ರಾಜಕಾರಣ ಮಾಡಬೇಕು. ನಾನು ಸೋತಾಗ ಇನ್ನು ಮುಂದೆ ರಾಜಕಾರಣ ಮಾಡಬಾರದು ಎಂದು ತೀರ್ಮಾನಿಸಿದ್ದೆ. ಆದರೆ ಬಣ್ಣ ಹಚ್ಚಿದ ಮೇಲೆ ಪಾತ್ರ ಮಾಡಲೇ ಬೇಕು. ಬಿಡಲು ಮನಸಾಗುವುದಿಲ್ಲ. ಬದಲಾವಣೆ ಬಯಸಿದ್ದೇನೆ. ಇನ್ನು ೧೫ ದಿನದಲ್ಲಿ ಕಾಂಗ್ರೆಸ್ ಸೇರಲು ನಿಶ್ಚಯಿಸಿದ್ದೇನೆ ಎಂದರು.
ಪ್ರತಿನಿತ್ಯ ಜನ ಅವರ ಕೆಲಸ ಮಾಡಿಸಿಕೊಳ್ಳಲು ಬರುತ್ತಾರೆ. ಅದಕ್ಕಾಗಿಯಾದರೂ ಅಧಿಕಾರ ಬೇಕೇ ಬೇಕಾಗುತ್ತದೆ. ನನ್ನ ಜೊತೆ ಗಾರರಿಗೂ ಒಳ್ಳೆಯದಾಗಬೇಕೆಂಬ ದೃಷ್ಟಿಯಿಂದ ಈ ತೀರ್ಮಾನಕ್ಕೆ ತಾವು ಬಂದಿರುವುದಾಗಿ ತಿಳಿಸಿ ದರು.
ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಗೋವಿಂದಪ್ಪ ಮಾತ ನಾಡಿ, ಶ್ರೀಕಾಂತ್ ಅವರು ಕೊಡುಗೈ ದಾನಿ. ಮಾನವೀಯ ಹೃದಯವುಳ್ಳ ವ್ಯಕ್ತಿ. ಸದ್ಭಾವನಾ ಅಂದರೆ ಎಲ್ಲರೂ ಸಮಾನತೆ ಯಿಂದ ಕೊಂಡೊಯ್ಯು ವುದು ಎಂದರ್ಥ. ಆ ಅರ್ಥಕ್ಕೆ ಸರಿಯಾಗಿ ಅವರು ನಡೆದುಕೊಳ್ಳುತ್ತಿ ದ್ದಾರೆ. ಕೊರೋನಾ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ಕಿಟ್ ಮತ್ತು ಆಹಾರ ಧಾನ್ಯ ಅವರು ವಿತರಿಸಿದ್ದರು. ಯಾವಾಗಲೂ ಪೌರ ಕಾರ್ಮಿಕರ ಜೊತೆಗೆ ಸ್ಪಂದಿಸಿದ ವ್ಯಕ್ತಿ. ಅವರಿಗೆ ದೇವರು ಆರೋಗ್ಯ, ಆಯಸ್ಸು ಕೊಡಲಿ ಎಂದರು.
ಕಾರ್ಯಕ್ರಮದಲ್ಲಿ ೩೫ ವಾರ್ಡ್ ಗಳ ಮಹಿಳಾ ಪೌರ ಕಾಮಿ ಕರಿಗೆ ಬಾಗಿನ ನೀಡಲಾಯಿತು. ಊಟದ ವ್ಯವಸ್ಥೆ ಮಾಡಲಾಗಿತ್ತು.
ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಮಾರಪ್ಪ, ಪೆಂಚಾಲಯ್ಯ, ರವೀಶ್, ಪ್ರಮುಖ ರಾದ ನಾಗರಾಜ್ ಕಂಕಾರಿ, ರಾಜಣ್ಣ, ಪಾಲಾಕ್ಷಿ, ಭಾಸ್ಕರ್, ಗೀತಾ ಸತೀಶ್, ಆನಂದ್, ಗಂಧದಮನೆ ನರಸಿಂಹ, ಭವಾನಿ ನರಸಿಂಹ, ವಿನಯ್ ತಾಂದಳೆ ಮೊದ ದವರಿದ್ದರು.