ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜನರ ಹೃದಯ ಗೆದ್ದ ಗೀತಕ್ಕ…

Share Below Link

ಶಿವಮೊಗ್ಗ : ಗೀತಾ ಶಿವರಾಜ್ ಕುಮಾರ್ ಅವರ ಸೋಲಿನ ಹೊಣೆ ನನ್ನದು. ಆದರೆ, ಇಲ್ಲಿ ಗೀತಕ್ಕ ೫.೩೦ ಲಕ್ಷ ಮತ ಪಡೆದು ಕ್ಷೇತ್ರದ ಜನರ ಹೃದಯ ಗೆದ್ದಿದ್ದಾರೆ. ಇದು ಖಂಡಿತ ಸೋಲಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.


ಜಿಲ್ಲಾ ಕಾಂಗ್ರೆಸ್‌ನಿಂದ ನಗರದ ಇಂದು ಆರ್ಯ ಈಡಿಗ ಭವನದಲ್ಲಿ ಆಯೋಜಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಶ್ರಮಿಸಿದ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು.
ಪ್ರಜಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಆಯ್ಕೆಗೆ ಬೆಲೆ ಕೊಡಬೇಕು. ಅವರ ಅಭಿಪ್ರಾಯ ವನ್ನು ಗೌರವಿಸಬೇಕು. ಆದ್ದರಿಂದ, ಈ ಸೋಲು ಮುಂದಿನ ಬದಲಾವಣೆಗೆ ಸ್ಪೂರ್ತಿ ಆಗಲಿದೆ. ಮತ ನೀಡಿ ಹರಸಿದ ಎಲ್ಲಾ ಮತದಾರರು ಹಾಗೂ ಕಾರ್ಯ ಕರ್ತರಿಗೆ ಧನ್ಯವಾದ ತಿಳಿಸಿದ ಅವರು, ಕೇಂದ್ರದಲ್ಲಿ ಬಿಜೆಪಿ ಗೆದ್ದಿರಬಹುದು. ಆದರೆ, ಆಂತರಿಕವಾಗಿ ಸೋತಿದೆ ಎಂದರು.
ಗೀತಾ ಶಿವರಾಜಕುಮಾರ್ ಅವರು ಕ್ಷೇತ್ರದಲ್ಲಿ ಸೋತಿರ ಬಹುದು. ಆದರೆ, ಜನರ ಮನಸ್ಸು ಗೆದ್ದಿದ್ದಾರೆ. ಚುನಾವಣೆಯಲ್ಲಿ ೫.೩೦ ಲಕ್ಷ ಮತ ಪಡೆಯುವ ಮೂಲಕ ಕ್ಷೇತ್ರದ ಮತದಾರರ ಹೃದಯ ಗೆದ್ದಿದ್ದೇವೆ. ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬಿ ಬಡವರ ಹಸಿವು ನೀಗಿಸು ತ್ತಿದೆ. ಆದರೆ, ಜನರು ಗೀತಕ್ಕ ಅವರ ಕೈ ಹಿಡಿಯಲಿಲ್ಲ. ಇದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತೇವೆ ಎಂದರಲ್ಲದೇ, ಬಿಜೆಪಿ ವಾಮ ಮಾರ್ಗ ಅನುಸರಿಸಿ ಅಧಿಕಾರಕ್ಕೆ ಬಂದಿದೆ ಎಂದರು.
ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಚುನಾವಣೆ ಪೂರ್ವ ಕ್ಷೇತ್ರದ ಎಲ್ಲಾ ಭಾಗದಲ್ಲಿ ಸಂಚರಿಸಿ, ಜನರಿಗೆ ಹತ್ತಿರ ಆಗಿದ್ದೇವೆ. ಇದು ದಣಿವಲ್ಲ. ಕ್ಷೇತ್ರದ ಜನರನ್ನು ಸಂಪರ್ಕಿಸಲು ಸಿಕ್ಕ ಅವಕಾಶ. ಇದರಿಂದ ಜನ ೫.೩೦ ಲಕ್ಷಗಳ ಮತ ನೀಡಿ, ಆಶೀರ್ವದಿಸಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲಾ ಮತದಾರರು ಹಾಗೂ ಕಾರ್ಯಕಕೂತರಿಗೆ ಧನ್ಯವಾದ ಹಾಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ಸೋಲು ಗೆಲುವನ್ನು ಸಮನಾಂತರವಾಗಿ ಸ್ವೀಕರಿಸಬೇಕು. ಇಲ್ಲಿ ಸೋಲಿಗೆ ಎದೆಗುಂದಕೂಡದು. ಇದು ನನ್ನ ಅನುಭವದ ಮಾತು ಎಂದರು.
ಈ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕಿರುವುದು ಕುರ್ಚಿ ಮಾತ್ರ, ಕುರ್ಚಿಯ ಕಾಲು ಬೇರೆಯವರ ಬಳಿ ಇದೆ. ಕಾಂಗ್ರೆಸ್ ಸೈದ್ಧಾಂತಿಕ ನಿಲುವನ್ನು ತೆಗೆದುಕೊಂಡಿದೆ ಎಂದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ ದೇಶದಲ್ಲಿ ಆದಷ್ಟು ಬೇಗ ಬಿಜೆಪಿ ಸರ್ಕಾರ ಕುಸಿದು ಬೀಳಲಿದೆ. ಮುಂದಿನ ಎರಡು ವರ್ಷದಲ್ಲಿ ಮತ್ತೊಂದು ಚುನಾವಣೆ ಎದುರಿಸಲಿದ್ದೇವೆ. ಅದ್ದರಿಂದ, ಇದಕ್ಕೆ ಸಿದ್ಧತೆ ಅಗತ್ಯ. ಲೋಕಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರನನ್ನು ದ್ವೇಷಿಸುವುದಿಲ್ಲ. ಈ ಸೋಲನ್ನು ಪ್ರೀತಿಯಿಂದ ಸ್ವೀಕರಿಸುತ್ತೇವೆ ಎಂದರು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಸ್. ರವಿಕುಮಾರ್, ಬಲ್ಕಿಷ್‌ಭಾನು, ಆರ್.ಎಂ.ಮಂಜುನಾಥ ಗೌಡ, ಎಂ. ಶ್ರೀಕಾಂತ್, ಎಚ್.ಸಿ. ಯೋಗೀಶ್, ನಾಗರಾಜ್ ಗೌಡ, ಬಿ. ಕೆ. ಮೋಹನ್, ಜಿ.ಪಲ್ಲವಿ, ಎನ್. ರಮೇಶ್, ಜಿ.ಡಿ. ಮಂಜು ನಾಥ, ಎಸ್.ಕೆ. ಮರಿಯಪ್ಪ, ಚಂದ್ರಭೂಪಾಲ್, ಅನಿತಾ ಕುಮಾರಿ, ಮುಡುಬ ರಾಘವೇಂದ್ರ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *