ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಸುಂದರೇಶ್…

Share Below Link

ಶಿವಮೊಗ್ಗ : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಇಬ್ಬರ ಪರವಾಗಿಯೂ ಶಿವಮೊಗ್ಗ ದಲ್ಲಿ ಅಬ್ಬರದ ಪ್ರಚಾರ ಮಾಡುತ್ತಿ zವೆ. ಇದಕ್ಕಾಗಿ ವಾರ್ಡ್ ಮಟ್ಟದಲ್ಲಿ ಸಮಿತಿ ರಚಿಸ ಲಾಗಿದೆ. ಪ್ರತಿ ವಾರ್ಡ್ ನಲ್ಲಿರುವ ಮತದಾರರನ್ನು ಗುರುತಿಸ ಲಾಗಿದೆ. ಮತದಾರರ ಮನೆಗಳಿಗೆ ಹೋಗಿ ಪ್ರಚಾರ ಮಾಡಿ ನಮ್ಮ ಅಭ್ಯರ್ಥಿ ಗಳನ್ನು ಗೆಲ್ಲಿಸುವಂತೆ ಮನವಿ ಮಾಡುತ್ತಿzವೆ. ಹಾಗೆಯೇ ಕ್ಷೇತ್ರದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿzರೆ. ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾ ಗಿರುವುದರಿಂದ ಈ ಇಬ್ಬರ ಗೆಲುವಿಗೆ ಸಹಕಾರವಾಗುತ್ತದೆ ಎಂದರು.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್‌ಗೆ ಬಹುಮತವಿಲ್ಲ. ಯಾವುದೇ ಶಾಸನಗಳು ಜರಿಯಾಗ ಬೇಕಾದರೆ ವಿಧಾನ ಪರಿಷತ್ ಒಪ್ಪಿಗೆಯೂ ಬೇಕಾಗುತ್ತದೆ. ಅಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಾಗ ಬೇಕಾಗಿದೆ. ಈ ಬಾರಿ ಆರು ಸದಸ್ಯ ರನ್ನು ಆಯ್ಕೆ ಮಾಡಬೇಕಿದ್ದು, ಈ ಆರು ಜನ ಆಯ್ಕೆಯಾಗುತ್ತಾರೆ ಎಂದರು.
ಆಯನೂರು ಮಂಜುನಾಥ್ ಅವರು ಈಗಾಗಲೇ ಒಂದು ಸುತ್ತು ಕ್ಷೇತ್ರದ ತುಂಬಾ ಪ್ರಚಾರ ಮಾಡಿ ಬಂದಿzರೆ. ಮತದಾರರ ಭೇಟಿಯಾಗುತ್ತಲೇ ಇzರೆ. ಅವರ ಬಗ್ಗೆ ಮತದಾರರಿಗೆ ಅತ್ಯಂತ ವಿಶ್ವಾಸವಿದೆ. ನಾಲ್ಕೂ ಮನೆಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗಿದೆ. ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಹಾಗಾಗಿ ಅವರು ಗೆz ಗೆಲ್ಲುತ್ತಾರೆ ಮತ್ತು ಶಿಕ್ಷಕ ಕ್ಷೇತ್ರದ ಅಭ್ಯರ್ಥಿ ಕೆ.ಕೆ. ಮಂಜು ನಾಥ್ ಕೂಡ ಶಿಕ್ಷಕರ ಸಮಸ್ಯೆಗಳ ಬಗ್ಗೆ ತಿಳಿದು ಕೊಂಡಿzರೆ. ಅವರೂ ಕೂಡ ಪ್ರಚಾರದಲ್ಲಿzರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸು ವುದಾಗಿ ಪ್ರಣಾಳಿಕೆ ಯಲ್ಲಿ ತಿಳಿಸಿದೆ. ಈಗಾಗಲೇ ಪದವೀಧರರಿಗೆ ಯುವನಿಧಿ ಯೋಜನೆ ಜರಿಗೊಳಿಸಲಾಗಿದೆ ಎಂದರು. ಜಿ ಕಾಂಗ್ರೆಸ್ ಪ್ರಮುಖರಾದ ಟಿ.ಎಸ್. ಚಂದ್ರಶೇಖರ್, ಚಂದ್ರಭೂಪಾಲ್, ಸೌಗಂಧಿಕಾ, ಹೆಚ್.ಎಂ. ಮಧು, ಜಿ.ಡಿ. ಮಂಜುನಾಥ್, ಚಿನ್ನಪ್ಪ ಇನ್ನಿತರರಿದ್ದರು.

This image has an empty alt attribute; its file name is Arya-coll.gif