ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯಶಿಕ್ಷಣ

ಗಮನ ಸೆಳೆದ ಮತದಾನ ಜಾಗೃತಿ ಮ್ಯಾರಾಥಾನ್…

Share Below Link

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ನಾಯಕರನ್ನು ಆರಿಸ ಬೇಕೆಂದು ಪ್ರಧಾನ ಜಿ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥನಾಯಕ್ ಕರೆ ನೀಡಿದರು.
ಜಿಡಳಿತ, ಜಿಪಂ, ಮಹಾ ನಗರಪಾಲಿಕೆ, ಜಿ ಸ್ವೀಪ್ ಸಮಿತಿ ವತಿಯಿಂದ ಏ.೫ರಂದು ಮತದಾನ ಕುರಿತು ಜಾಗೃತಿ ಮೂಡಿಸಲು ನೆಹರೂ ಮೈದಾನದಿಂದ ಏರ್ಪಡಿಸಿದ್ದ ಮ್ಯಾರಾಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಮೇ ೭ ರಂದು ತಾವೆಲ್ಲವರೂ ತಪ್ಪದೇ ಮತಗಟ್ಟೆಗಳಿಗೆ ಬಂದು ಮತದಾನ ಮಾಡಬೇಕು. ಇತ್ತೀಚೆಗೆ ಮತದಾನ ಪ್ರಮಾಣ ಕಡಿಮೆ ಯಾಗುತ್ತಿದೆ. ಆದರೆ ನಮ್ಮ ಜಿಲ್ಲೆ ಯಲ್ಲಿ ಹೆಚ್ಚು ಪ್ರಮಾಣದ ಮತದಾನ ಆಗಲೆಂದು ಸ್ವೀಪ್ ವತಿಯಿಂದ ಅನೇಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇಂದು ಅಪರೂಪದ ಮ್ಯಾರಾಥಾನ್ ಆಯೋಜನೆ ಮಾಡಲಾಗಿದೆ.
ಮತದಾನ ಮಾಡಲು ಇಚ್ಚೆ ಇರುವವರಿಗೆ ಮತದಾನ ಹಕ್ಕು ಆಗುತ್ತದೆ. ಇತರರು ಮತದಾನ ಮಾಡಬೇಕೆಂದು ಪ್ರೇರೇಪಿಸುವುದು ಕರ್ತವ್ಯ ಆಗುತ್ತದೆ. ಯುವಜನತೆ ದೇಶದ ದೊಡ್ಡ ಶಕ್ತಿ ಮತ್ತು ಜನರನ್ನು ತಲುಪಲು ದೊಡ್ಡ ಮಾಧ್ಯಮ. ಆದ್ದರಿಂದ ನಿಮ್ಮ ಮೂಲಕ ಎಲ್ಲರನ್ನು ತಲುಪುವ ಕೆಲಸ ಮಾಡಾಗುತ್ತಿದೆ ಎಂದರು.
ನಾವೆಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಅತ್ಯಂತ ಪ್ರಮುಖವಾಗಿದೆ. ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗವಹಿಸಬೇಕೆಂಬ ಉದ್ದೇಶ ದಿಂದ ಮಾನ್ಯ ಸರ್ವೋಚ್ಚ ನ್ಯಾಯಾಲಯವು ನೋಟಾ ಮತದಾನದ ಅವಕಾಶ ನೀಡಿದೆ. ಮತದಾರರಿಗೆ ಒಂದು ವೇಳೆ ಯಾವ ಅಭ್ಯರ್ಥಿಗೂ ಮತ ಹಾಕಲು ಇಷ್ವವಿಲ್ಲದಿದ್ದರೆ ನೋಟಾ ಬಳಕೆ ಮಾಡಬಹುದು ಎಂದರು.
ನಾವು ಆರಿಸುವ ಜನಪ್ರತಿನಿಧಿಗಳು ಕಾನೂನು ರೂಪಿಸುವವವ ರಾದ್ದರಿಂದ ಅತ್ಯಂತ ಜವಾಬ್ದಾರಿ ಯಿಂದ ನಾಯಕರನ್ನು ಆರಿಸಬೇಕಿದ್ದು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗಹವಹಿಸಬೇಕು ಹಾಗೂ ಇತರರನ್ನೂ ಪ್ರೇರೇಪಿಸುವ ಕೆಲಸ ಆಗಬೇಕು ಎಂದು ಕರೆ ನೀಡಿದರು.
ಮತದಾನದ ಕುರಿತಾದ ಪ್ರತಿe ವಿಧಿಯನ್ನು ಬೋಧಿಸಲಾಯಿತು. ವಿವಿಧತೆಯಲ್ಲಿ ಐಕ್ಯತೆ ಸಾರುವ ನಾ ಭಾರತ ಭಾರತ ನನ್ನಲ್ಲಿ ಗೀತೆಯನ್ನು ಹಾಡಲಾಯಿತು. ಇದೇ ಸಂದರ್ಭ ದಲ್ಲಿ ಮಾಚೇನಹಳ್ಳಿ ಕೆಎಸ್‌ಆರ್‍ಪಿ ತಂಡವು ಬ್ಯಾಂಡ್ ಮೂಲಕ ನಾ ಭಾರತ ಗೀತೆಯನ್ನು ನುಡಿಸಿ ಎಲ್ಲರ ಗಮನ ಸೆಳೆದರು.
ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹ್ಮದ್ ಪರ್ವೀಜ್ ಮಾತನಾಡಿ, ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು. ಹಾಗೂ ಯಾವುದೇ ರೀತಿಯ ಚುನಾವಣಾ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಸಿವಿಜಿಲ್ ಆಪ್ ಡೌನ್‌ಲೋಡ್ ಮಾಡಿ ಕೊಂಡು ದೂರು ನೀಡಬಹುದು. ಅಥವಾ ೧೯೫೦ ಗೆ ಸಹ ಕರೆ ಮಾಡಿ ದೂರು ಸಲ್ಲಿಸಬಹುದು ಎಂದರು.
ಘೋಷಣೆಗಳ ಮೂಲಕ ಜಗತಿ: ಮ್ಯಾರಾಥಾನ್‌ನಲ್ಲಿ ನೂರಾರು ಕಾಲೇಜು ವಿದ್ಯಾರ್ಥಿ ಗಳು, ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದು, ಮ್ಯಾರಾಥಾನ್ ನೆಹರು ಕ್ರೀಡಾಂಗಣದಿಂದ ಮಹಾವೀರ ಸರ್ಕಲ್, ಶಿವಪ್ಪನಾಯಕ ಸರ್ಕಲ್, ಅಮೀರ್ ಅಹಮದ್ ಸರ್ಕಲ್, ಗೋಪಿ ಸರ್ಕಲ್, ಜೈಲ್ ಸರ್ಕಲ್, ಶಿವಮೂರ್ತಿ ಸರ್ಕಲ್ ಮೂಲಕ ಸಾಗಿ ಬಂದು ನೆಹರೂ ಮೈದಾನ ತಲುಪಿತು.
ಮ್ಯಾರಾಥಾನ್‌ನಲ್ಲಿ ಚುನಾವಣಾ ಪರ್ವ ದೇಶದ ಗರ್ವ ಎಂಬ ಘೋಷಣೆಯೊಂದಿಗೆ ನೋಡಿ ನಾವು ಶಿವಮೊಗ್ಗದ ಜನ ಮಾಡೇ ಮಾಡ್ತಿವಿ ಮತದಾನ ಮಲೆನಾಡ ಹೆಬ್ಗಾಗಿಲು ನಮ್ಮೂರು ಮತದಾನ ಮಾಡಲು ಮರೆಯದಿರು, ಮತದಾನ ನಿಮ್ಮ ಮಹಾಶಕ್ತಿ-ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ, ಬಾರಿಸು ಕನ್ನಡ ಡಿಂಡಿಮವ, ಮರೆಯದೆ ಮಾಡೋಣ ಮತದಾನವ ಎಂಬಿತ್ಯಾದಿ ಘೋಷಣೆಗಳುಳ್ಳ ಪೋಸ್ಟರ್‍ಗಳನ್ನು ಹಿಡಿದು ಜಗತಿ ಮೂಡಿಸಲಾಯಿತು.
ಜಿ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಅವರು ಮ್ಯಾರಾಥಾನ್‌ನಲ್ಲಿ ಮೊದಲು ಬಂದ ಮೂರು ಅಭ್ಯರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಯಿತು. ಹಾಗೂ ಮೆದಲು ತಲುಪಿದ ೪೭ ಜನರಿಗೆ ಪದಕ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿ ಪಂ ಸಿಪಿಓ ಗಾಯತ್ರಿ, ಯೋಜನಾ ನಿರ್ದೇಶಕ ರಂಗಸ್ವಾಮಿ, ಕೆಎಸ್‌ಆರ್‍ಪಿ ಕಮಾಂಡೆಂಟ್ ಯುವರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಂಜುನಾಥಸ್ವಾಮಿ, ಚುನಾವಣಾ ಐಕಾನ್ ಡಾ. ಶುಬ್ರತಾ, ಮಹಾನಗರಪಾಲಿಕೆ, ಜಿ.ಪಂ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.