ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಾಗರದಲ್ಲಿ ಮತದಾನ ಜಗೃತಿ ಕಾರ್ಯಕ್ರಮ

Share Below Link

ಶಿವಮೊಗ್ಗ :೧೮ ವರ್ಷ ತುಂಬಿದ ಎ ಅರ್ಹ ಮತ ದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜ ಪ್ರಭುತ್ವವನ್ನು ಬೆಂಬಲಿಸಬೇಕು ಹಾಗೂ ಸಂವಿಧಾನ ಕಲ್ಪಿಸಿಕೊಟ್ಟ ಅವಕಾಶವನ್ನು ಸದುಪಯೋಗ ಪಡಿಸಿ ಕೊಳ್ಳಬೇಕೆಂದು ಸಾಗರ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ನಾಗೇಶ್ ಎನ್ ಬ್ಯಾಲಾಳ್ ತಿಳಿಸಿದರು.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ ಕ್ಕೆ ಸಂಬಂಧಿಸಿದಂತೆ ಜಿಡಳಿತ, ಜಿ ಪಂಚಾಯತ್ ಮತ್ತು ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಸಾಗರ ವತಿಯಿಂದ ಏ.೨೫ ಆಯೋಜಿಸಲಾಗಿದ್ದ ಮತದಾನ ಜಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಡ್ಡಾಯವಾಗಿ ಎಲ್ಲ ಅರ್ಹರು ಮತದಾನ ಮಾಡುವಂತೆ ಕೋರಿದ ಅವರು ನೆರಿದ್ದ ಸಾರ್ವಜನಿಕರು, ಅಧಿಕಾರಿ, ಸಿಬ್ಬಂದಿಗಳಿಗೆ ಪ್ರತಿe ವಿಧಿಯನ್ನು ಬೋಧಿಸಿದರು.
ಜಿ ಸ್ವೀಪ್ ಸಮಿತಿ ಉಪ ನೋಡಲ್ ಅಧಿಕಾರಿ ನವೀದ್ ಅಹ್ಮದ್ ಪರ್ವೀಜ್ ಮಾತನಾಡಿ, ಸಾರ್ವಜನಿಕರು ಸಿ-ವಿಜಿಲ್ ಆಪ್ ಬಳಸುವ ಮೂಲಕ ಚುನಾವಣಾ ಅಕ್ರಮಗಳನ್ನು ತಡೆಯುವಲ್ಲಿ ಕೈಜೋಡಿಸಬಹುದು. ಏಪ್ರಿಲ್ ೧೧ ರವರೆಗೆ ಪರಿಷ್ಕರಣೆ ಆಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಲು ವಿಹೆಚ್‌ಎ ಆಪ್ ಬಳಸಬಹುದು. ಈ ಬಾರಿ ಆಯೋಗವು ವಿಶೇಷ ಚೇತನರು ಮತ್ತು ೮೦ ವರ್ಷ ಮೇಲ್ಪಟ್ಟ ಮತದಾರರಿಗೆ ಪೋಸ್ಟಲ್ ಬ್ಯಾಲಟ್ ಮೂಲಕ ಮತ ಚಲಾಯಿಸಲು ಅವಕಾಶ ಕಲ್ಪಿಸಿದ್ದು ಚುನಾವಣೆ ಕುರಿತು ಹೆಚ್ಚಿನ ಯಾವುದೇ ಮಾಹಿತಿಗೆ ವೆಬ್‌ಸೈಟ್ceo karnatakakaನೋ ಡಬಹುದು ಎಂದರು.
ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ, ರಂಗೋಲಿ ಸ್ಪರ್ಧೆ ಹಾಗೂ ಜಥಾ, ಮಾನವ ಸರಪಳಿ ರಚಿಸುವ ಮೂಲಕ ಮತದಾನ ಜಗೃತಿ ಘೋಷಣೆಗಳನ್ನು ಕೂಗು ವ ಮೂಲಕ ಮತದಾರರ ಜಗೃತಿ ಹಬ್ಬದಂತೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಚಂದ್ರಪ್ಪ ಸಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಂತೋಷ, ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪ, ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸ್ವಸಹಾಯ ಸಂಘದ ಮಹಿಳೆಯರು ಪಾಲ್ಗೊಂಡಿದ್ದರು.