ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ನ್ಯಾ| ಸಂತೋಷ್ ಹೆಗಡೆಯವರ ಜೊತೆ ಯುವ ಸಂವಾದ…

Share Below Link

ಶಿವಮೊಗ್ಗ : ಯುವ ಸ್ಫೂರ್ತಿ ಅಕಾಡೆಮಿ ಚಿಕ್ಕಮಗಳೂರು, ವಿಸ್ತಾರ ನ್ಯೂಸ್ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿeನ ಪದವಿ ಪೂರ್ವ ಕಾಲೇಜು, ಗಾಜನೂರು ಇವರ ಸಹಯೋಗ ದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಯುವ ಸ್ಫೂರ್ತಿ ಅಕಾಡೆಮಿಯ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವು ಜರುಗಿತು.
ಸುಪ್ರೀಂ ಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಹಾಗೂ ಕರ್ನಾಟಕ ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿಗಳಾದ ಎನ್.ಸಂತೋಷ್ ಹೆಗಡೆಯವರು ಆಗಮಿಸಿ ಕಾರ್ಯಕ್ರಮದ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮ ನಡೆಸಿದರು.
ಅವರ ಜೀವನದ ನೈಜ ಘಟನೆ ಗಳನ್ನು ಸ್ಮರಿಸುತ್ತಾ ಪ್ರಾಮಾಣಿಕತೆ ಹಾಗೂ ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಿಸಬೇಕಾದರೆ ವಿದ್ಯಾರ್ಥಿಗಳ ಪಾತ್ರ ಎಷ್ಟು ಮುಖ್ಯವಾಗುತ್ತದೆ ಎಂಬುದರ ಬಗ್ಗೆ ಸಂದೇಶ ನೀಡಿ, ವಿದ್ಯಾ ಸಂಸ್ಥೆಯ ಮಕ್ಕಳ ಶಿಸ್ತಿನ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಮತ್ತೋರ್ವ ಅತಿಥಿಗಳಾದ ಖ್ಯಾತ ನ್ಯಾಯವಾದಿ ವಿಕ್ರಂ ಪಡ್ಕೆರವರು ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ಕಿರು ಪರಿಚಯ ಮಾಡುತ್ತಾ ಕಾನೂನಿನ ಅರಿವು ಮತ್ತು ಜಾಗೃತಿ ಮೂಡಿಸುವ ಮಾತುಗಳಾನ್ನಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶಿವಮೊಗ್ಗದ ದೊಡ್ಡಮ್ಮ ದೇವಿ ಉಪಾಸಕರಾದ ಶ್ರೀ ಸಿದ್ದಪ್ಪಾಜಿ ವಹಿಸಿದ್ದರು. ಚಿಕ್ಕಮಗಳೂರಿನ ಯುವಸ್ಪೂರ್ತಿ ಅಕಾಡೆಮಿಯ ಮುಖ್ಯಸ್ಥ ಸುಂದರೇಶ್ .ಸಿ.ಬಿ. ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ವಿಶೇಷ ವಾದ ಯೋಗ ಪ್ರದರ್ಶನವನ್ನು ಸಾಗರದ ಕುಮಾರಿ ಪ್ರeರವರು ನಡೆಸಿಕೊಟ್ಟರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಯುವ ಸ್ಪೂರ್ತಿ ಸೇವಾ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಗಾಜನೂರಿನ ಮೊರಾರ್ಜಿ ದೇಸಾಯಿ ವಿeನ ವಸತಿ ಪಪೂ ಕಾಲೇಜಿನ ಪ್ರಾಂಶುಪಾಲ ಲೋಕಪ್ಪ .ವಿ. ದಳವಾಯಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕೆರಿಯರ್ ಪ್ಲಾನಿಂಗ್ ಪಠ್ಯಕ್ರಮದ ತರಬೇತುದಾರ ಮುರಳಿ.ಎಸ್.ಡಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಶ್ವೇತ ವಂದಿಸಿದರು. ಗಣಕ ವಿeನ ಶಿಕ್ಷಕಿ ಪಂಕಜ.ಹೆಚ್.ಎಸ್ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕರ್ನಾಟಕದ ಹಲವು ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.